- Advertisement -
- Advertisement -
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹಿರಿಯ ನಾಗರಿಕರಿಗೆ ಶೀಘ್ರ ದೇವರ ದರ್ಶನಕ್ಕೆ ಪ್ರತ್ಯೇಕ ಸೌಲಭ್ಯ ಆರಂಭವಾಗಿದೆ.
ಧಾರ್ಮಿಕ ದತ್ತಿ ಇಲಾಖೆಯು 65 ವರ್ಷ ಮೇಲ್ಪಟ್ಟ ಭಕ್ತರಿಗೆ ಶೀಘ್ರ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ತನ್ನ ಅಧೀನದ ದೇಗುಲಗಳ ಆಡಳಿತ ಮಂಡಳಿಗಳಿಗೆ ಇತ್ತೀಚೆಗೆ ಆದೇಶ ನೀಡಿತ್ತು. ಅದರಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ರಾಜಗೋಪುರ ಬಳಿ ವಿಶೇಷವಾಗಿ ಹಿರಿಯ ನಾಗರಿಕರ ಸಹಾಯ ಕೇಂದ್ರವನ್ನು ಸ್ಥಾಪಿಸಲಾಗಿದೆ. ಹಿರಿಯ ನಾಗರಿಕರು ಸಾಲಿನಲ್ಲಿ ನಿಂತು ಕಾಯದೆ ನೇರವಾಗಿ ದೇವರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಅವರು ಶೀಘ್ರವಾಗಿ ಸೇವೆಗಳನ್ನು ನೆರವೇರಿಸಿ ಪ್ರಸಾದ ಭೋಜನ ಸ್ವೀಕರಿಸಬಹುದಾಗಿದೆ.
ಕರಾವಳಿ ಯಲ್ಲಿರುವ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಪ್ರಮುಖ ದೇವಸ್ಥಾನಗಳಲ್ಲೂ ಈ ಆದೇಶ ಜಾರಿಗೆ ಬಂದಿದೆ.
- Advertisement -