- Advertisement -
![]()
- Advertisement -
ಬೆಳ್ತಂಗಡಿ: ನಗರದ ಮೂರು ಮಾರ್ಗದ ಬಳಿ ಇರುವ ಗಣೇಶ್ ಹೋಟೆಲ್ ಮಾಲೀಕ ದಿವಾಕರ್ ಪ್ರಭು ( 57) ಇಂದು ನಿಧನರಾಗಿದ್ದಾರೆ.
ಕಳೆದ ಒಂದು ವಾರಗಳ ಹಿಂದೆ ಕುಸಿದು ಬಿದ್ದು ಕೋಮ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇದ್ದುದರಿಂದ ಬದುಕುವುದಿಲ್ಲ ಎಂದು ವೈದ್ಯರು ಕೈಬಿಟ್ಟಿದ್ದರು. ಜು.08ರಂದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅದರೆ ಜುಲೈ 10(ಇಂದು) ಮಧ್ಯಾಹ್ನ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಹಲವಾರೂ ವರ್ಷಗಳಿಂದ ಬೆಳ್ತಂಗಡಿ ಮೂರು ಮಾರ್ಗದ ಬಳಿ ಹೋಟೆಲ್ ಉದ್ಯಮವನ್ನು ನಡೆಸುತಿದ್ದ ಇವರು ಎಲ್ಲರೊಂದಿಗೆ ಆತ್ಮೀಯತೆಯಿಂದ ಬೆರೆಯುತ್ತಿದ್ದರು.
- Advertisement -


