ಮಂಗಳೂರು: ಅಪಾರ್ಟ್ಮೆಂಟ್ನ 5ನೇ ಮಹಡಿಯಿಂದ ಜಾರಿ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕದ್ರಿ ಶಿವಭಾಗ್ನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಪ್ರಸ್ತುತ ಕದ್ರಿ ಶಿವಭಾಗ್ ನಿವಾಸಿ ಸಮಯ್ (21) ಮೃತಪಟ್ಟ ವಿದ್ಯಾರ್ಥಿ
ಭಾನುವಾರ ಬೆಳಗ್ಗೆ ಶಿವಭಾಗ್ ಅಪಾರ್ಟ್ಮೆಂಟ್ನ ತಮ್ಮ ಫ್ಲ್ಯಾಟ್ನ ಬಾಲ್ಕನಿಯಲ್ಲಿ ಸಮಯ್ ಅವರು ಓದುತ್ತಿದ್ದಾಗ ಅವರ ತಾಯಿ ಕಾರು ವಾಶ್ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಹೋಗಿದ್ದಾರೆ. ಈ ವೇಳೆ ಸಮಯ್ ಅವರು ಬಾತ್ರೂಂಗೆ ಹೋಗಿ ಬಂದು, ಬಳಿಕ ನೆಲಮಹಡಿಯ ಪಾರ್ಕಿಂಗ್ ಜಾಗದಲ್ಲಿರುವ ತನ್ನ ತಾಯಿ ಬಳಿ ಕಾರು ತೊಳೆಯಲು ಬಕೆಟ್ ಕೊಂಡು ಹೋಗಿದ್ದೀರಾ ಎಂದು ಬಾಲ್ಕನಿಯಿಂದ ಕೇಳಿದ್ದಾರೆ. ಈ ಸಂದರ್ಭ ಮಳೆ ನೀರಿನ ಹನಿಯಿಂದ ಜಾರಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.
ಸಮಯ್ ಅವರ ತಂದೆ ಸಿವಿಲ್ ಇಂಜಿನಿಯರ್ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ಈ ದಂಪತಿಯ ಇಬ್ಬರು ಗಂಡು ಮಕ್ಕಳಲ್ಲಿ ಸಮಯ್ ಹಿರಿಯವರು.ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.