Friday, June 27, 2025
Homeಕರಾವಳಿಉಡುಪಿಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ; ಕೊಲೆ ಆರೋಪಿ ಚಿಕ್ಕೋಡಿಯಲ್ಲಿ ಅರೆಸ್ಟ್

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ; ಕೊಲೆ ಆರೋಪಿ ಚಿಕ್ಕೋಡಿಯಲ್ಲಿ ಅರೆಸ್ಟ್

spot_img
- Advertisement -
- Advertisement -

ಚಿಕ್ಕೋಡಿ: ಉಡುಪಿ ಜಿಲ್ಲೆಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪ್ರವೀಣ್​​​​ ಮಂಗಳೂರು ಏರ್​ಪೋರ್ಟ್​ನಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಕ್ಯಾಬಿನ್ ಕ್ರ್ಯೂ ಆಗಿ ಕೆಲಸ ಮಾಡುತ್ತಿದ್ದು, ಮೃತ ಅಝ್ನಾಝ್ ಕೂಡಾ ಏರ್ ಇಂಡಿಯಾ ಎಕ್ಸ್ ಪ್ರೆಸ್ ಕ್ಯಾಬಿನ್ ಕ್ರ್ಯೂ ಆಗಿದ್ದಳು.

ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದವನಾಗಿದ್ದು, ಕುಡಚಿಯ ಸಂಬಂಧಿ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಕೊಲೆ ಆರೋಪಿಯನ್ನು ಪೊಲೀಸರು ಅರೆಸ್ಟ್​​ ಮಾಡಿದ್ದು, ಕುಡಚಿಯಿಂದ ಉಡುಪಿಗೆ ಕರೆ ತರುತ್ತಿದ್ದಾರೆ.

- Advertisement -
spot_img

Latest News

error: Content is protected !!