Saturday, June 6, 2026
Homeಕರಾವಳಿಅಮಲು ಪದಾರ್ಥ ಸೇವಿಸಿದ ವ್ಯಕ್ತಿಯಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ

ಅಮಲು ಪದಾರ್ಥ ಸೇವಿಸಿದ ವ್ಯಕ್ತಿಯಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ

- Advertisement -
- Advertisement -

ಪುತ್ತೂರು: ತಾಲೂಕಿನ ಆಡಳಿತ ಸೌಧದ ಬಳಿಯಲ್ಲಿ ಅಮಲು ಪದಾರ್ಥ ಸೇವಿಸಿ, ನಶೆಯಲ್ಲಿದ್ದ ವ್ಯಕ್ತಿಯೋರ್ವ ಪೊಲೀಸರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಬಡಗನ್ನೂರು ಮೂಲದ ಹರೀಶ್ ಹಲ್ಲೆ ನಡೆಸಿದ ವ್ಯಕ್ತಿ. ಈತ ಕುಡಿದ ನಶೆಯಲ್ಲಿ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ಕುರಿತು ವ್ಯಕ್ತಿಯ ಬಗ್ಗೆ ಠಾಣೆಗೆ ಮಾಹಿತಿ ನೀಡಲಾಗಿತ್ತು. ಇದರಂತೆ 112 ತುರ್ತು ಸೇವೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರು. ಆಗ ಸ್ಥಳಕ್ಕೆ ಆಗಮಿಸಿದ ಪೊಲೀಸ್‌ ಸಿಬ್ಬಂದಿ ನಶೆಯಲ್ಲಿದ್ದ ವ್ಯಕ್ತಿಯನ್ನು ಸಂಭಾಳಿಸುತ್ತಿದ್ದ ಸಂದರ್ಭದಲ್ಲಿ ಆ ವ್ಯಕ್ತಿ ಏಕಾಏಕೀ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಇನ್ನು ವ್ಯಕ್ತಿಯಿಂದ ಹಲ್ಲೆಗೊಳಗಾದ ಸಂಚಾರ ಪೊಲೀಸ್‌ ಠಾಣೆಯ ಸಿಬ್ಬಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!