Saturday, June 28, 2025
Homeಕರಾವಳಿಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು

spot_img
- Advertisement -
- Advertisement -

ಪುತ್ತೂರು: ಬೆಟ್ಟಂಪಾಡಿಯಲ್ಲಿ ಕಾರ್ಮಿಕರೊಬ್ಬರು ಅಡಿಕೆ ಕೊಯ್ಯುವ ವೇಳೆ ಮರದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿ ನಿಡ್ನಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಸಯ್ಯದ್ (45). 

ಬೆಟ್ಟಂಪಾಡಿ ಸಮೀಪದ ಕೃಷಿಕರೋರ್ವರ ಮನೆಗೆ ಸಯ್ಯದ್  ಅವರು ಅಡಿಕೆ ಕೊಯ್ಯಲು ತೆರಳಿದ್ದರು. ಈ ವೇಳೆ ಅಡಿಕೆ ಕೊಯ್ಯುವಾಗ ಕಾಲು ಜಾರಿ ಮರದಿಂದ ಕೆಳಗೆ ಬಿದ್ದ ಇವರನ್ನು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ತಲುಪುವ ವೇಳೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!