Saturday, June 13, 2026
Homeಕರಾವಳಿಮಂಗಳೂರಿನಲ್ಲಿ ರಾಮಮಂದಿರ ಮಂತ್ರಾಕ್ಷತೆ ವಿತರಿಸಿದ ವಿಪಕ್ಷ ನಾಯಕ ಅಶೋಕ್

ಮಂಗಳೂರಿನಲ್ಲಿ ರಾಮಮಂದಿರ ಮಂತ್ರಾಕ್ಷತೆ ವಿತರಿಸಿದ ವಿಪಕ್ಷ ನಾಯಕ ಅಶೋಕ್

- Advertisement -
- Advertisement -

ಮಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಇಂದು ಮಂಗಳೂರು ದಕ್ಷಿಣ ವಿದಾನಸಭಾ ಕ್ಷೇತ್ರದಲ್ಲಿ ರಾಮಮಂದಿರ ಉದ್ಘಾಟನೆಯ ಆಮಂತ್ರಣ ಪತ್ರಿಕೆ ಹಾಗೂ ಮಂತ್ರಾಕ್ಷತೆ ವಿತರಿಸಿದರು.

ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ವಿತರಿಸಿದ ಆರ್. ಅಶೋಕ್ ಜೊತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ವಿಪಕ್ಷ ನಾಯಕ ಅಶೋಕ್ ನಿನ್ನೆ ಮತ್ತು ಇಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದರು.

ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ.

- Advertisement -

Latest News

error: Content is protected !!