Wednesday, June 3, 2026
Homeತಾಜಾ ಸುದ್ದಿಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥೆ; ಗೃಹ ಸಚಿವ...

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥೆ; ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳೋದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟ ಪಡಿಸಿದ್ದಾರೆ.

ಈ ಬಗ್ಗೆ ಮಾತನಡಿದ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪೋಕ್ಸೋ ಕೇಸ್ ಬಹಳ ಸೂಕ್ಷ್ಮವಾದಂತ ವಿಚಾರವಾಗಿದೆ.ನಾವು ರಾಜಕೀಯ ಇದರಲ್ಲಿ ಮಾಡೋದಿಲ್ಲ. ಯಾವುದೇ ವಿಷಯ ತಿಳಿಸೋದಕ್ಕೂ ಆಗಲ್ಲ. ಮಹಿಳೆಯ ದೂರು ಆಧರಿಸಿ, ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದೂರು ನೀಡಿದಂತ ಮಹಿಳೆ ಮಾನಸಿಕವಾಗಿ ಅಸ್ವಸ್ಥೆ ಎಂಬುದಾಗಿ ಹೇಳಲಾಗುತ್ತಿದೆ. ಜೊತೆಗೆ ಆಕೆ ಕೈ ಬರಹದಿಂದ ದೂರು ನೀಡಿಲ್ಲ. ಬದಲಾಗಿ ಟೈಪ್ ಮಾಡಿಸಿದಂತ ದೂರನ್ನು ಪೊಲೀಸರಿಗೆ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಯ ನಂತ್ರ ಇನ್ನಷ್ಟು ಮಾಹಿತಿ ತಿಳಿಸುತ್ತೇನೆ. ಅಲ್ಲಿಯವರೆಗೆ ನಾನು ಈ ಪ್ರಕರಣ ಕುರಿತಂತೆ ಏನೂ ಮಾತನಾಡುವುದಿಲ್ಲ ಎಂಬುದಾಗಿ ಹೇಳಿದರು.

- Advertisement -

Latest News

error: Content is protected !!