- Advertisement -
- Advertisement -
ಕಾರ್ಕಳ; : ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾರ್ಕಳ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ. ಕುಕ್ಕುಂದೂರು ಗ್ರಾಮದ ಸದಾನಂದ ಪೂಜಾರಿ (40) ಮೃತ ದುರ್ದೈವಿ.
ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಸದಾನಂದ ಅವರ ಮೃತದೇಹ ಶನಿವಾರ ಬೆಳಿಗ್ಗೆ ಮನೆ ಎದುರಿನ ತೆರೆದ ಬಾವಿಯಲ್ಲಿ ಪತ್ತೆಯಾಗಿತ್ತು. ರಾತ್ರಿ ನಿದ್ದೆಯಿಂದ ಎದ್ದು ಮನೆ ಹೊರಗಡೆ ಬಂದ ಸದಾನಂದರು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬೇಕೆಂದು ಶಂಕಿಸಲಾಗಿದೆ.
- Advertisement -