Sunday, August 30, 2026
Homeಕರಾವಳಿಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಸುದ್ದಿಗೋಷ್ಠಿ ಮುಂದೂಡಿಕೆ

ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಸುದ್ದಿಗೋಷ್ಠಿ ಮುಂದೂಡಿಕೆ

- Advertisement -
- Advertisement -

ಬೆಂಗಳೂರಿನಲ್ಲಿ ಇಂದು ಸದಾನಂದ ಗೌಡ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಜೊತೆ ಚರ್ಚೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಮುಂದೂಡಲಾಗಿದೆ ಎಂದು ಹೇಳಲಾಗಿದೆ.

ಮಧ್ಯಾಹ್ನದ ಬಳಿಕ ಡಿ.ವಿ. ಸದಾನಂದ ಗೌಡ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿದ್ದು, ಸುದ್ದಿಗೋಷ್ಠಿ ಕುತೂಹಲ ಕೆರಳಿಸಿದೆ.

ಸದಾನಂದ ಗೌಡ ಕಾಂಗ್ರೆಸ್ ಸೇರ್ಪಡೆ ಕುರಿತಾದ ವದಂತಿಗಳ ನಡುವೆಯೇ ಒಕ್ಕಲಿಗ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂಬ ಮಾತನ್ನೂ ಕೆಲವು ದಿನಗಳ ಹಿಂದೆ ಸದಾನಂದ ಗೌಡ ಹೇಳಿದ್ದು, ಸುದ್ದಿಗೋಷ್ಠಿಯಲ್ಲಿ ಮಹತ್ವದ ವಿಚಾರಗಳ ಬಗ್ಗೆ ಮಾತನಾಡುವ ನಿರೀಕ್ಷೆಯಿದೆ.

- Advertisement -

Latest News

error: Content is protected !!