ಬೆಳ್ತಂಗಡಿ: ಬಿಜೆಪಿ ಯುವ ಮೋರ್ಛಾ ಮುಖಂಡರೊಬ್ಬರನ್ನು ಪೊಲೀಸರು ಬಂಧಿಸಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪೊಲೀಸ್ ಠಾಣೆ ಎದುರು ಕಾರ್ಯಕರ್ತರ ಜೊತೆ ಧರಣಿ ನಡೆಸಿದ್ದಾರೆ.
ಬಿಜೆಪಿ ಯುವ ಮೋರ್ಛಾ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬವರನ್ನು ಬಂಧನ ಮಾಡಿದ್ದು, ಈ ಸಂಬಂಧವಾಗಿ ಪೊಲೀಸರ ವಿರುದ್ಧ ಶಾಸಕ ಹರೀಶ್ ಪೂಂಜ ಅಸಮಾಧಾನ ವ್ಯಕ್ತಪಡಿಸಿ, ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.
![](https://mahaxpress.com/wp-content/uploads/2024/05/WhatsApp-Image-2024-05-19-at-12.42.56_c5553d61-1024x682.jpg)
ಅಕ್ರಮ ಕಲ್ಲು ಕೋರೆ ಮೇಲಿನ ದಾಳಿಯ ನೆಪದಲ್ಲಿ ಬಿಜೆಪಿ ಯುವ ಮೋರ್ಛಾ ಅಧ್ಯಕ್ಷರನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸರ ವಿರುದ್ಧ ಆರೋಪ ಮಾಡಲಾಗಿದೆ.ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟುವಿನಲ್ಲಿರುವ ಕಲ್ಲಿನ ಕೋರೆಗೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸ್ ದಾಳಿ ನಡೆದಿತ್ತು.
ಈ ನೆಪದಲ್ಲಿ ಶಶಿರಾಜ್ ಶೆಟ್ಟಿ ಅವರನ್ನು ಮನೆಯಿಂದ ಬಂಧಿಸಿದ್ದು ಕೂಡಲೇ ಬಿಡುಗಡೆಗೊಳಿಸುವಂತೆ ಶಾಸಕ ಪೂಂಜ ಆಗ್ರಹಿಸಿದ್ದಾರೆ.ಪ್ರಮೋದ್ ದಿಡುಪೆ ದ.ಕ ಜಿಲ್ಲಾ ಬಿಜೆಪಿ ಯುವ ಮೊರ್ಚಾ ಉಪಾಧ್ಯಕ್ಷದ್ದಾರೆ. ಶಶಿರಾಜ್ ಶೆಟ್ಟಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದಾರೆ.