- Advertisement -
- Advertisement -
ಶಿವಮೊಗ್ಗ: ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅವರಿಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬೆಂಬಲ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಈಶ್ವರಪ್ಪ ನಿವಾಸದಲ್ಲಿ ಸಿದ್ಧತಾ ಸಭೆ ನಡೆಯಿತು.
ರಾಷ್ಟೃಭಕ್ತರ ಬಳಗದ ಹೆಸರಿನಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿ ರಘುಪತಿ ಭಟ್, ಈಶ್ವರಪ್ಪ ಪುತ್ರ ಕೆ.ಇ. ಕಾಂತೇಶ್ ಮತ್ತು ಈಶ್ವರಪ್ಪ ಬೆಂಬಲಿಗರು ಪಾಲ್ಗೊಂಡಿದ್ದರು.
ಚುನಾವಣಾ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ರಘುಪತಿ ಭಟ್ ಅವರಿಗೆ ಪೂರ್ಣ ಬೆಂಬಲ ಘೋಷಿಸಿದ್ದಾರೆ.
- Advertisement -