- Advertisement -
![]()
- Advertisement -
ಬೆಳ್ತಂಗಡಿ: ಹಳೆಕೋಟೆ ಬಳಿ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿಯ ಹಳೇಕೋಟೆ ಬಳಿಯ ಪೆಟ್ರೋಲ್ ಪಂಪ್ ಬಳಿ ಮಣ್ಣು ಹೇರಿಕೊಂಡು ಹೋಗುತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಲಾರಿಯಡಿ ಸಿಲುಕಿ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಮಚ್ಚಿನದ ಕೃಷಿಕ ವಿನೋದ್ ಗೌಡ(45) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ರಸ್ತೆ ಅಪಘಾತಗಳು ಹೆಚ್ಚಾಗುತಿದ್ದು ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಇದಕ್ಕೆಲ್ಲ ಕಾರಣ ರಸ್ತೆಯ ಅವ್ಯವಸ್ಥೆ ಎಂದು ಅಸಾಮಾಧಾನ ವ್ಯಕ್ತಪಡಿಸುತ್ತಿರುವ ಸಾರ್ವಜನಿಕರು ಇನ್ನೆಷ್ಟು ಬಲಿ ಬೇಕು ಎಂಬ ಪ್ರಶ್ನೆ ಮಾಡುತ್ತಿದ್ದಾರೆ.
- Advertisement -


