Tuesday, June 9, 2026
HomeUncategorizedಸಂಸತ್ ಪ್ರವೇಶಿಸುತ್ತಿರುವ ದೇಶದ ಕಿರಿಯ ಸಂಸದ ಬೀದರ್ ನ ಸಾಗರ್ ಖಂಡ್ರೆ

ಸಂಸತ್ ಪ್ರವೇಶಿಸುತ್ತಿರುವ ದೇಶದ ಕಿರಿಯ ಸಂಸದ ಬೀದರ್ ನ ಸಾಗರ್ ಖಂಡ್ರೆ

- Advertisement -
- Advertisement -

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಭಗವಂತ ಖೂಬಾ ವಿರುದ್ಧ ಸಚಿವ ಈಶ್ವರ್ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ದೇಶದ ಕಿರಿಯ ಸಂಸದ ಎಂಬ ಹೆಗ್ಗಳಿಕೆಯೊಂದಿಗೆ 26 ನೇ ವಯಸ್ಸಿಗೆ ಸಾಗರ್ ಸಂಸತ್ತು ಪ್ರವೇಶಿಸುತ್ತಿದ್ದಾರೆ.

ಸಚಿವ ಈಶ್ವರ್​ ಖಂಡ್ರೆ ಪುತ್ರ, ಸಾಗರ ಖಂಡ್ರೆ ಬೀದರ್​ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಿದ್ದಾರೆ. ಕ್ಷೇತ್ರವನ್ನು ಮರಳಿ “ಕೈ” ವಶವಾಗಿದೆ. ಸಾಗರ ಖಂಡ್ರೆ ಗೆಲವು ಸುಲಭವಾದದ್ದು ಅಲ್ಲ. ಸಾಗರ ಖಂಡ್ರೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿಯ ಘಟಾನುಘಟಿ ನಾಯಕ ಕೇಂದ್ರ ಸಚಿವ ಭಗವಂತ ಖೂಬಾ ಸೋಲುಂಡಿದ್ದಾರೆ.

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ವಿಪಕ್ಷ ನಾಯಕ ಆರ್​. ಅಶೋಕ್,​ ಸಾಗರ ಖಂಡ್ರೆ ಒಬ್ಬ ಅನುಭವ ಇಲ್ಲದ ಹುಡುಗ, ಆತ ಗೆದ್ದರೆ ಸಂಸತ್‌ಗೆ ಸ್ಕೂಲ್ ಬ್ಯಾಗ್, ಬುಕ್ ಹಿಡಿದು ಕರೆದುಕೊಂಡು ಹೋಗಲು ಒಬ್ಬರು ಬೇಕು ಎಂದು ವ್ಯಂಗ್ಯ ವಾಡಿದ್ದರು. ಆದರೆ ಸಾಗರ ಖಂಡ್ರೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತಾನು ಪ್ರಭುದ್ದನಾಗಿದ್ದೇನೆ ಎಂದು ಅಶೋಕ್ ಗೆ ತಿರುಗೇಟು ನೀಡಿದ್ದಾರೆ.

- Advertisement -

Latest News

error: Content is protected !!