Sunday, June 29, 2025
Homeತಾಜಾ ಸುದ್ದಿಉತ್ತರಾಖಂಡದ ಡೆಹ್ರಾಡೂನ್ ಗೆ ಚಾರಣಕ್ಕೆ ತೆರಳಿದ್ದ 9 ಮಂದಿ ಕನ್ನಡಿಗರು ಸಾವು

ಉತ್ತರಾಖಂಡದ ಡೆಹ್ರಾಡೂನ್ ಗೆ ಚಾರಣಕ್ಕೆ ತೆರಳಿದ್ದ 9 ಮಂದಿ ಕನ್ನಡಿಗರು ಸಾವು

spot_img
- Advertisement -
- Advertisement -

ಬೆಂಗಳೂರು: ಉತ್ತರಾಖಂಡದ ಡೆಹ್ರಾಡೂನ್ ಗೆ ಚಾರಣಕ್ಕೆ ತೆರಳಿದ್ದ 9 ಮಂದಿ ಕನ್ನಡಿಗರು ಹವಾಮಾನ ವೈಪರಿತ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನಾನು ಈಗ ಡೆಹ್ರಾಡೂನ್ ನ ರಾಜ್ಯ ಅತಿಥಿ ಗೃಹದಲ್ಲಿರುವ 8 ಜನರ ಗುಂಪನ್ನು ಭೇಟಿಯಾಗಿ ಸಂವಾದ ನಡೆಸಿದ್ದೇನೆ.ಅವರೆಲ್ಲರೂ ಸಾಮಾನ್ಯ ಆರೋಗ್ಯದಲ್ಲಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ವಿವಿಧ ಅಧಿಕಾರಿಗಳೊಂದಿಗೆ ನಾನು ಚರ್ಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಹವಾಮಾನ ವೈಪರಿತ್ಯದ ಕಾರಣಕ್ಕಾಗಿ ಕರ್ನಾಟಕದ 9 ಮಂದಿ ಸಾವನ್ನಪ್ಪಿದ್ದಾರೆ. ಎಲ್ಲಾ 9 ಮೃತದೇಹಗಳನ್ನು ಡೆಹ್ರಾಡೂನ್ಗೆ ಸಾಗಿಸಲು ನಾವು ಸ್ಥಳೀಯ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ. ಸಾಧ್ಯವಾದಷ್ಟು ಬೇಗ ಶವಗಳನ್ನು ಬೆಂಗಳೂರಿಗೆ ಸಾಗಿಸಲು ನಾವು ವ್ಯವಸ್ಥೆ ಮಾಡುತ್ತಿದ್ದೇವೆ ಎಂದಿದ್ದಾರೆ.

- Advertisement -
spot_img

Latest News

error: Content is protected !!