Friday, June 27, 2025
Homeಕರಾವಳಿಉಡುಪಿಮಳೆಗಾಲದ ಅವಘಡಗಳ ಬಗ್ಗೆ ಎಚ್ಚರಿಕೆ ವಹಿಸಲು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಮಳೆಗಾಲದ ಅವಘಡಗಳ ಬಗ್ಗೆ ಎಚ್ಚರಿಕೆ ವಹಿಸಲು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

spot_img
- Advertisement -
- Advertisement -

ಉಡುಪಿ: ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಈ ಬಾರಿ ಹವಾಮಾನ ಇಲಾಖೆ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದ್ದು‌ ಮುಂದಿನ ದಿನಗಳಲ್ಲಿ ಮಳೆಯಿಂದ ಹಾನಿಗೊಳಗಾದವರಿಗೆ ಬೇಗ ಪರಿಹಾರ ಒದಗಿಸಬೇಕು ಎಂದು ಆದೇಶಿಸಿದರು.

ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆಗೆ ಜಿಲ್ಲಾ ಪಂಚಾಯತ್ ಸಿಇಒಗೆ ಸೂಚನೆ ನೀಡಿದ ಸಚಿವರು, ಉಡುಪಿ ನಗರ ಪ್ರದೇಶದಲ್ಲಿ ಮಳೆ ನೀರು ಸರಾಗವಾಗಿ ಹರಿಯದ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ.

ಅಲ್ಲದೇ, ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಆದಷ್ಟು ಶೀಘ್ರ ಆದ್ಯತೆ ಮೇಲೆ ಕೈಗೊಳ್ಳಬೇಕು. ಕುಡಿಯುವ ನೀರಿನೊಂದಿಗೆ ಮಳೆ ನೀರು ಸೇರಿದಂತೆ ಕಲುಷಿತ ನೀರು ಮಿಶ್ರಣ ಗೊಳ್ಳದಂತೆ ಕ್ರಮವಹಿಸಬೇಕು.‌ ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಆಗಿಂದಾಗ್ಗೆ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!