- Advertisement -
- Advertisement -
ಚಿಕ್ಕಮಗಳೂರಿನ ಪ್ರಸಿದ್ಧ ಟ್ರಕ್ಕಿಂಗ್ ಸ್ಪಾಟ್ ಎತ್ತಿನ ಭುಜಕ್ಕ ಪ್ರವಾಸಿಗರಿಗೆ ನಿರ್ಬಂಧವನ್ನು ಹೇರಲಾಗಿದೆ.

ಮೊದಲೇ ಇಲ್ಲಿನ ನಿರ್ಬಂಧ ಹೇರಲಾಗಿದ್ದರೂ ನಿರ್ಬಂಧದ ಮಧ್ಯೆಯೂ ಸಾಕಷ್ಟು ಜನ ಬರುತ್ತಲೇ ಇದ್ದರು. ಪ್ರವಾಸೋದ್ಯಮದ ಅಡಿ ರಾಜ್ಯದ ವಿವಿಧೆಡೆ ಆನ್ಲೈನ್ ಟಿಕೆಟ್ ವ್ಯವಸ್ಥೆ ಮಾಡಿ ಪ್ರವಾಸಿಗರ ಸಂಖ್ಯೆಯನ್ನು ಸೀಮಿತಗೊಳಿಸುವವರೆಗೆ ಚಾರಣ ಪ್ರದೇಶಗಳಲ್ಲಿ ಪ್ರವೇಶ ನಿರ್ಬಂಧಿಸಿ ಈಗಾಗಲೇ ಸೂಚನೆ ನೀಡಲಾಗಿದೆ. ಆದರೂ ಜೂ. 15, 16, 17ರಂದು ರಜೆ ಇದ್ದ ಕಾರಣ ಮುಳ್ಳಯನಗಿರಿ, ಎತ್ತಿನಭುಜದಲ್ಲಿ ಸಾವಿರಾರು ಚಾರಣಿಗರು ಭೇಟಿ ನೀಡಿದ್ದರು. ಹಾಗಾಗಿ ತಾತ್ಕಾಲಿಕವಾಗಿ ಚಾರಣ ನಿರ್ಬಂಧವಾಗಿದ್ದರೂ ಅವಕಾಶ ನೀಡಿರುವ ಬಗ್ಗೆ ಪರಿಶೀಲಿಸಿ, ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದಾರೆ.

- Advertisement -