- Advertisement -
- Advertisement -
ಚಿಕ್ಕಬಳ್ಳಾಪುರ: ಬೆಂಗಲಿಗರು ಹಾಗೂ ಬಲಿಜ ಸಮುದಾಯದ ಮುಖಂಡರು ಶಾಸಕ ಪ್ರದೀಪ್ ಈಶ್ವರ್ ಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಸೋಮವಾರದಂದು ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬೆಂಗಲಿಗರು ಹಾಗೂ ಬಲಿಜ ಸಮುದಾಯದ ಮುಖಂಡರು, ’ಪ್ರದೀಪ್ ಈಶ್ವರ್ ರಾಜ್ಯದಲ್ಲಿ ಬಲಿಜ ಸಮುದಾಯದಿಂದ ಆಯ್ಕೆಗೊಂಡ ಏಕೈಕ ಶಾಸಕರಾಗಿದ್ದಾರೆ. ಆದ್ದರಿಂದ ಸಾಮಾಜಿಕ ನ್ಯಾಯದಡಿಯಲ್ಲಿ ಅವರಿಗೆ ಬರುವ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅವಕಾಶ ನೀಡಬೇಕೆಂದು,’ ಆಗ್ರಹಿಸಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ಆಗಬೇಕಾದರೆ ಪ್ರದೀಪ್ ಈಶ್ವರ್ ಗೆ ಕೂಡಲೇ ಸಚಿವ ಸ್ಥಾನ ನೀಡಬೇಕು. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಟರು ಸೂಕ್ತ ಕ್ರಮ ವಹಿಸಬೇಕೆಂದರು.
- Advertisement -