- Advertisement -
- Advertisement -
ಹೊಸದಿಲ್ಲಿ: NEET-UG paper leak case ಕುರಿತು ಪ್ರತಿಕ್ರಯಿಸಿದ ಪ್ರಧಾನಿ ಮೋದಿ, ಯುವಕರ ಭವಿಷ್ಯದೊಂದಿಗೆ ಆಟವಾಡುವವರನ್ನು ಬಿಜೆಪಿ ಸರಕಾರವು ಎಂದಿಗೂ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
‘ಯುವಕರ ಭವಿಷ್ಯದೊಂದಿಗೆ ಆಟವಾಡುವವರನ್ನು ಸರಕಾರ ಬಿಡುವುದಿಲ್ಲ. ಭ್ರಷ್ಟಾಚಾರದ ವಿರುದ್ಧ ಕ್ರಮಕೈಗೊಳ್ಳಲು ತನಿಖಾ ಸಂಸ್ಥೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇನೆ, ಸರಕಾರ ಮಧ್ಯಪ್ರವೇಶಿಸುವುದಿಲ್ಲ. ಈ ವಿಚಾರದಲ್ಲಿ ವಿರೋಧ ಪಕ್ಷಗಳು ದೇಶದ ಯುವಜನರ ಭವಿಷ್ಯದೊಂದಿಗೆ ರಾಜಕೀಯ ಮಾಡುತ್ತಿವೆ’ ಎಂದು ಆರೋಪಿಸಿದರು.
ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಉತ್ತರಿಸಿ ವಿಪಕ್ಷಗಳ ಮೇಲೆ ಕಿಡಿ ಕಾರಿದರು.
- Advertisement -