- Advertisement -
![]()
- Advertisement -
ಬೆಂಗಳೂರು ;ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಸನ್ ಸೇರಿದಂತೆ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಡಿ ಗ್ಯಾಂಗನ್ನು ಜೈಲು ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.
ಇನ್ನು ಇಂದು ಆರೋಪಿಗಳನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ ಬಳಿಕವಷ್ಟೇ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪೊಲೀಸರು ಚಾರ್ಚ್ ಶೀಟ್ ನಲ್ಲಿ ಯಾವೆಲ್ಲಾ ಅಂಶಗಳನ್ನ ಉಲ್ಲೇಖ ಮಾಡ್ತಾರೋ ,ಆ ಅಂಶಗಳ ಮೇಲೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ.
ಈ ಹಿನ್ನಲ್ ಚಾರ್ಜ್ ಶೀಟ್ ಆಗುವವರೆಗೂ ವಕೀಲರು ಕಾಯುವ ತಂತ್ರಕ್ಕೆ ಮೊರೆ ಹೋಗಿದ್ದಾರೆ ಎನ್ನಲಾಗಿದೆ.
- Advertisement -


