- Advertisement -
- Advertisement -
ಬೆಂಗಳೂರು: ತಮ್ಮ ನಿರೂಪಣಾ ಶೈಲಿಯ ಮೂಲಕವೇ ಕನ್ನಡಿಗರ ಮನೆ ಮನಗಳಲ್ಲಿ ಜಾಗ ಪಡೆದಿದ್ದ ಅಪ್ಪಟ ಕನ್ನಡತಿ, ನಿರೂಪಕಿ ಅಪರ್ಣಾ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.
ಬೆಂಗಳೂರಿನ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅಪರ್ಣಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಿತು.
ಇಂದು ಬೆಳಗ್ಗೆ 7:30 ಗಂಟೆ ಆಸ್ಪತ್ರೆಯಿಂದ ಅಪರ್ಣಾ ಅವರ ಪಾರ್ಥೀವ ಶರೀರವನ್ನು ಬನಶಂಕರಿಯ ಎರಡನೇ ಹಂತದಲ್ಲಿರುವ ಅವರ ನಿವಾಸಕ್ಕೆ ತರಲಾಯಿತು. ಅಲ್ಲಿ 11:30 ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆ ಬಳಿಕ 1 ಗಂಟೆಗೆ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ಅಪರ್ಣಾ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಯಿತು. ಅಲ್ಲಿ ಸ್ಮಾರ್ಥ ಬ್ಯಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದ ಬಳಿಕ, ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.
- Advertisement -