- Advertisement -
![]()
- Advertisement -
ಮಂಗಳೂರು: ಮಂಗಳೂರು ಹೊರವಲಯದಲ್ಲಿ ಚಿರತೆ ಹಾವಳಿ ಕಂಡು ಬಂದಿದೆ.ಬಜ್ಪೆಯ ಪೆರಾರ ಎಂಬಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಪುಚ್ಚಾಳ ಸುಂದರ ಎಂಬವರ ಮನೆಯ ನಾಯಿ ಮರಿಯನ್ನು ಹೊತ್ತೊಯ್ದಿದೆ.
ರಾತ್ರಿ ವೇಳೆ ನಾಯಿ ಮರಿಯನ್ನು ಚಿರತೆ ಹೊತ್ತೊಯ್ದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೆಲವು ದಿನಗಳಿಂದ ಬಜ್ಪೆ ಪರಿಸರದಲ್ಲಿ ಚಿರತೆ ಓಡಾಡುತ್ತಿದೆ ಎಂದು ಹೇಳಲಾಗಿದೆ.
ಕೂಡಲೇ ಆತಂಕ ಹುಟ್ಟಿಸಿರುವ ಚಿರತೆಯನ್ನು ಸೆರೆ ಹಿಡಿಯುವಂತೆ ನಾಗರಿಕರಿಂದ ಅರಣ್ಯ ಇಲಾಖೆಗೆ ಒತ್ತಾಯ ವ್ಯಕ್ತವಾಗಿದೆ.
- Advertisement -


