- Advertisement -
- Advertisement -
ಮುಂಬೈ: ಮಹಾರಾಷ್ಟ್ರದಲ್ಲಿ ಹೋಟೆಲ್ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ವಿಚಾರವಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಹೋಟೆಲ್ ಉದ್ಯಮಿಗಳ ನಿಯೋಗದೊಂದಿಗೆ ಮಹಾರಾಷ್ಟ್ರ ಡಿಸಿಎಂ ಭೇಟಿ ಮಾಡಿದ ಬ್ರಿಜೇಶ್ ಚೌಟ ಮತ್ತು ನಳೀನ್ ಕುಮಾರ್ ಕಟೀಲ್, ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.
ನಿಯೋಗದ ಬೇಡಿಕೆ ಆಲಿಸಿದ ದೇವೇಂದ್ರ ಫಡ್ನವೀಸ್, ಎಲ್ಲವನ್ನೂ ಸಮಗ್ರವಾಗಿ ಅವಲೋಕಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮಾಜಿ ಸಂಸದ ಗೋಪಾಲ್ ಶೆಟ್ಟಿ, ಮತ್ತು ಸಚ್ಚಿದಾನಂದ ಶೆಟ್ಟಿ ಭಾರತೀಯ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ನಿಯೋಗದಲ್ಲಿ ಉಪಸ್ಥಿತರಿದ್ದರು.
- Advertisement -