- Advertisement -
- Advertisement -
ಮಂಗಳೂರು: ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರು ತಾಲೂಕಿನ ಗುರುಪುರದಲ್ಲಿ ಸಂಭವಿಸಿದೆ.
ಆಶ್ನಿ (21) ಮೃತ ವಿದ್ಯಾರ್ಥಿನಿಯಾಗಿದ್ದು, ಗದ್ದೆಯಲ್ಲಿ ದನ ಕಟ್ಟಿ ಹಾಕಲು ಮನೆಯಿಂದ ತೆರಳಿದ್ದ ವೇಳೆ ಈ ಅವಘಡ ನಡೆದಿದೆ.
ತಂದೆಯೊಂದಿಗೆ ಗದ್ದೆಗೆ ಹೋಗಿದ್ದ ಆಶ್ನಿ ಜೊತೆಗೆ ಮನೆಯ ಸಾಕು ನಾಯಿ ಕೂಡಾ ತೆರಳಿದ್ದು, ನಾಯಿಗೆ ಮೊದಲು ವಿದ್ಯುತ್ ಶಾಕ್ ತಗುಲಿದೆ.
ಶಾಕ್ ಹೊಡೆದಿದ್ದರಿಂದ ನಾಯಿ ಗದ್ದೆಯಲ್ಲಿ ಬಿದ್ದು ಹೊರಳಾಡುವುದನ್ನು ನೋಡಿ ಆಶ್ನಿ ನಾಯಿಯ ರಕ್ಷಣೆಗೆ ಮುಂದಾಗಿದ್ದು ಈ ವೇಳೆ ಗಮನಿಸದೇ ತುಂಡಾಗಿ ಬಿದ್ದಿದ್ದ ತಂತಿ ತುಳಿದು ಶಾಕ್ ಗೆ ಒಳಗಾಗಿದ್ದಾಳೆ.
ಭಾರೀ ಪ್ರಮಾಣದಲ್ಲಿ ಗಾಳಿ ಮತ್ತು ಮಳೆ ಇದ್ದ ಹಿನ್ನೆಲೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಗದ್ದೆಯಲ್ಲಿ ಬಿದ್ದಿದ್ದರಿಂದಾಗಿ ಅನಾಹುತ ಸಂಭವಿಸಿದೆ.
- Advertisement -