ರಾಮನಗರ; ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈಸೂರಿಗೆ ಪಾದಯಾತ್ರೆ ನಡೆಸುತ್ತಿದೆ. ಈ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಕಾರ್ಯಕರ್ತೆಯೊಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಬನಶಂಕರಿಯ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಗೌರಮ್ಮ ಅವರ ಮೃತದೇಹವನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ. ಇನ್ನು ನಿಖಿಲ್ ಕುಮಾರಸ್ವಾಮಿ ಕೂಡಾ ಅಂತಿಮ ದರ್ಶನ ಪಡೆದಿದ್ದಾರೆ.

ಇನ್ನು ಮೃತ ಗೌರಮ್ಮ ಅವರು ಬೆಂಗಳೂರಿನ ತ್ಯಾಗರಾಜನಗರದ ಮಂಜುನಾಥ ಕಾಲೋನಿಯ ನಿವಾಸಿಯಾಗಿದ್ದಾರೆ ಎನ್ನಲಾಗಿದೆ. ಚನ್ನಪಟ್ಟಣದಲ್ಲಿ ಪಾದಯಾತ್ರೆ ವೇಳೆ ಮತ್ತೋರ್ವ ಬಿಜೆಪಿ ಮುಖಂಡ ಅಸ್ವಸ್ಥಗೊಂಡಿದ್ದು ಅವರನ್ನು ರಾಮನಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಬೆಂಗಳೂರಿನ ಬಿಜೆಪಿ ಜಯನಗರ ಮಂಡಳ ಉಪಾಧ್ಯಕ್ಷ ಶಂಕರ್ ಅಸ್ವಸ್ಥರಾಗಿದ್ದಾರೆ,ಪಾದಯಾತ್ರೆ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು.ಆಸ್ಪತ್ರೆಗೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಸಿ.ಕೆ. ರಾಮಮೂರ್ತಿ ಮತ್ತು ರವಿಸುಬ್ರಮಣ್ಯ ಶಂಕರ್ ಆರೋಗ್ಯ ವಿಚಾರಿಸಿದ್ದಾರೆ.