- Advertisement -
- Advertisement -
ಸುಬ್ರಹ್ಮಣ್ಯ: ರಾಕಿಂಗ್ ಸ್ಟಾರ್ ನಟ ಯಶ್ ಅವರು ನಿನ್ನೆ ಕುಟುಂಬ ಸಮೇತ ಬೆಳ್ತಂಗಡಿಯ ಸುರ್ಯ ದೇವಸ್ಥಾನ, ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಅಲ್ಲಿಂದ ನೇರವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜ ಸಲ್ಲಿಸಿದರು
ಈ ವೇಳೆ ನಟ ಯಶ್ ಅವರನ್ನು ದೇಗುಲದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭ ದೇಗುಲದ ವತಿಯಿಂದ ನಡೆಯುತ್ತಿರುವ ಅನ್ನದಾನಕ್ಕೆ ನಟ ಯಶ್ ಅವರು ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ನಟ ಯಶ್ ಅವರ ಮುಂದಿನ ಸಿನಿಮಾ ಟಾಕ್ಸಿಕ್ ನ ಶೂಟಿಂಗ್ ಆಗಸ್ಟ್ 8 ರಿಂದ ಆರಂಭವಾಗಲಿದ್ದು, ಅದಕ್ಕೂ ಮೊದಲು ಅವರು ಟೆಂಪಲ್ ರನ್ ನಡೆಸಿದ್ದಾರೆ.
- Advertisement -