- Advertisement -
- Advertisement -
ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಭೇಟಿ ನೀಡಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠದ ಅಷ್ಟಮಿ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲು ಕೇರಳ ರಾಜ್ಯಪಾಲರು ಉಡುಪಿಗೆ ಆಗಮಿಸಿದ್ದ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಉಡುಪಿಗೆ ತೆರಳುವುದಕ್ಕೂ ಮುನ್ನ ಕೊಲ್ಲೂರಿಗೆ ಭೇಟಿ ನೀಡಿದ ರಾಜ್ಯಪಾಲರು ಮೂಕಾಂಬಿಕಾ ದೇವಿಯ ದರ್ಶನ ಪಡೆದಿದ್ದಾರೆ.
ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಆರೀಫ್ ಮೊಹಮ್ಮದ್ ಖಾನ್ ಅವರನ್ನು ದೇವಸ್ಥಾನದ ಅರ್ಚಕರಾದ ನರಸಿಂಹ ಅಡಿಗ ಮತ್ತು ಸುಬ್ರಹ್ಮಣ್ಯ ಅಡಿಗ ಅವರು ಸ್ವಾಗತಿಸಿದರು.
- Advertisement -