Saturday, June 6, 2026
Homeಕರಾವಳಿಮಂಗಳೂರು; ವಿಷವಿಲ್ಲದ ಹಾವೆಂದು ಹಿಡಿದು ಹಾವು ಕಚ್ಚಿ ವ್ಯಕ್ತಿ ಸಾವು

ಮಂಗಳೂರು; ವಿಷವಿಲ್ಲದ ಹಾವೆಂದು ಹಿಡಿದು ಹಾವು ಕಚ್ಚಿ ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು; ವಿಷವಿಲ್ಲದ ಹಾವೆಂದು ಹಿಡಿದು ಹಾವು ಕಚ್ಚಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬಜ್ಪೆಯಲ್ಲಿ ನಡೆದಿದೆ.ಬಜ್ಪೆಯ ರಾಮಚಂದ್ರ ಪೂಜಾರಿ(55) ಮೃತ ದುರ್ದೈವಿ.

ಗುರುವಾರ ಅವರ ಪರಿಸರದಲ್ಲಿ ಕನ್ನಡಿ ಹಾವೊಂದು ಕಾಣಿಸಿಕೊಂಡಿತ್ತು. ಇದನ್ನು ರಾಮಚಂದ್ರ ಪೂಜಾರಿ ಅವರು ವಿಷರಹಿತ ಹಾವೆಂದು ತಪ್ಪಾಗಿ ತಿಳಿದು ಕೈಯಲ್ಲಿ ಹಿಡಿದಿದ್ದಾರೆ. ಆದರೆ ಈ ವೇಳೆ ಹಾವು ರಾಮಚಂದ್ರ ಅವರ ಕೈಗೆ ಕಚ್ಚಿದೆ. ಇದನ್ನು ಗಂಭೀರವಾಗಿ ಪರಿಗಣಿಸದ ರಾಮಚಂದ್ರ ಅವರು ಮನೆಗೆ ತೆರಳಿದ್ದರು. ಆದರೆ ಸಂಜೆಯಾಗುತ್ತಲೇ ಅವರ ಅರೋಗ್ಯ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಶುಕ್ರವಾರ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!