Friday, June 27, 2025
Homeತಾಜಾ ಸುದ್ದಿಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆರಾಜೀನಾಮೆ ; ಸಿಎಂ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ

ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆರಾಜೀನಾಮೆ ; ಸಿಎಂ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ

spot_img
- Advertisement -
- Advertisement -

ನವದೆಹಲಿ : ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ ಮಾಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಎರಡು ದಿನಗಳ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಎರಡು ದಿನಗಳ ನಂತರ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ, ಜನರು ತೀರ್ಪು ನೀಡುವವರೆಗೆ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ನಾನು ಪ್ರತಿ ಮನೆ, ಬೀದಿಗೆ ಹೋಗುತ್ತೇನೆ ಮತ್ತು ಕುಳಿತುಕೊಳ್ಳುವುದಿಲ್ಲ. ನಾನು ಜನರಿಂದ ತೀರ್ಪು ಬರುವವರೆಗೂ ಸಿಎಂ ಕುರ್ಚಿ ಮೇಲೆ ಕೂರುವುದಿಲ್ಲ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!