- Advertisement -
- Advertisement -
ಉಳ್ಳಾಲ: ಹರೇಕಳ ಸಮೀಪದ ಪಾವೂರು ಉಳಿಯ ದ್ವೀಪ ಪ್ರದೇಶದಲ್ಲಿ ಮತ್ತೆ ಅಕ್ರಮ ಮರಳುಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ.
ಅಕ್ರಮ ಗಣಿಗಾರಿಕೆ ಮತ್ತೆ ಆರಂಭವಾಗಿರುವುದನ್ನು ವಿರೋಧಿಸಿ ನೀರಿನಲ್ಲಿ ಮುಳುಗಿ ದ್ವೀಪ ಪ್ರದೇಶದ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.
ಈ ಹಿಂದೆ ಮರಳು ದಂಧೆಯಿಂದಾಗಿ ಇಡೀ ದ್ವೀಪವೇ ನಾಶವಾಗುವ ರೀತಿ ಆಗಿತ್ತು.
ಎರಡು ತಿಂಗಳ ಹಿಂದೆ ಕೆಡಿಪಿ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗಮನಕ್ಕೆ ತಂದಿದ್ದ ವೇಳೆ ಮರಳು ದಂಧೆಗೆ ಕಡಿವಾಣ ಹಾಕುವಂತೆ ಸಚಿವರು ಸೂಚನೆ ನೀಡಿದ್ದರು.
ಸ್ಥಳಕ್ಕೆ ಅಧಿಕಾರಿಗಳ ಭೇಟಿ ಬಳಿಕ ಸ್ಥಗಿತಗೊಂಡಿದ್ದ ಮರಳುಗಾರಿಕೆ ಕೆಲವು ದಿನಗಳಿಂದ ಮತ್ತೆ ಅಕ್ರಮವಾಗಿ ಆರಂಭವಾಗಿದೆ ಎಂದು ಆರೋಪಿಸಲಾಗಿದೆ.
ದ್ವೀಪ ಪ್ರದೇಶದಲ್ಲಿ ಸುಮಾರು 50 ಕ್ಕೂ ಅಧಿಕ ಕುಟುಂಬಗಳು ವಾಸವಿದ್ದು, ಅಕ್ರಮ ಮರಳುಗಾರಿಕೆಯಿಂದ ಸುಮಾರು 100 ಎಕರೆಯಷ್ಟಿದ್ದ ದ್ವೀಪದ ಅರ್ಧದಷ್ಟು ಭೂಮಿ ನೀರು ಪಾಲಾಗಿದೆ ಎನ್ನಲಾಗಿದೆ.
- Advertisement -