Saturday, June 6, 2026
Homeತಾಜಾ ಸುದ್ದಿಬೆಂಗಳೂರು : ಅಕ್ರಮ ಡಿನೋಟಿಫಿಕೇಶನ್ ಪ್ರಕರಣ; ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ಮಾಜಿ ಸಿಎಂ ಬಿ...

ಬೆಂಗಳೂರು : ಅಕ್ರಮ ಡಿನೋಟಿಫಿಕೇಶನ್ ಪ್ರಕರಣ; ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ

- Advertisement -
- Advertisement -

ಬೆಂಗಳೂರು : ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿಯಾದ ಹಿನ್ನೆಲೆಯಲ್ಲಿ ಇಂದು ಅವರು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದರು. ಲೋಕಾಯುಕ್ತ ಅಧಿಕಾರಿಗಳಿಂದ ವಿಚಾರಣೆ ಮುಗಿಸಿ ಕಚೇರಿಯಿಂದ ಯಡಿಯೂರಪ್ಪ ತೆರಳಿದ್ದಾರೆ.

ಏನಿದು ಪ್ರಕರಣ?

ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಎಸ್​​​ ಯಡಿಯೂರಪ್ಪ ಈ ಇಬ್ಬರೂ ನಾಯಕರು ಜಂಟಿಯಾಗಿ ಡಿನೋಟಿಫಿಕೇಷನ್​ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪವಿದೆ. ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು A1 ಆರೋಪಿಯನ್ನಾಗಿ ಮಾಡಲಾಗಿದೆ.ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆಗೂ ಹೆಚ್ಚು ಗುಂಟೆ ಭೂಮಿಯನ್ನು ಸತ್ತವರ ಹೆಸರಲ್ಲಿ ಕುಮಾರಸ್ವಾಮಿ ಹಾಗೂ ಬಿಎಸ್​​ವೈ ಅಕ್ರಮವಾಗಿ ಡಿನೋಟಿಫಿಕೇಷನ್​ ಮಾಡಿಸಿದ್ದರು ಎಂಬ ಆರೋಪವಿದೆ. 2007ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ, ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ IAS​​ ಅಧಿಕಾರಿ ರಾಕೇಶ್ ಸಿಂಗ್ ಅವರಿಂದ ನಿಯಮ 164ರಡಿ ಲೋಕಾಯುಕ್ತ ಅಧಿಕಾರಿಗಳು ಮಾಜಿಸ್ಟ್ರೇಟ್​​​​​​ ಮುಂದೆ ಹೇಳಿಕೆ ಪಡೆದುಕೊಂಡಿದ್ದರು.

- Advertisement -

Latest News

error: Content is protected !!