Friday, June 27, 2025
Homeತಾಜಾ ಸುದ್ದಿಮದ್ಯಪಾನ ಮಾಡಿ ವಾಹನ ಚಲಾಯಿಸಿಬೇಡಿ;  ಸಂಚಾರಿ ನಿಯಮ ಉಲ್ಲಂಘಿಸಿದರೆ ಡಿಎಲ್ ರದ್ದು: ಸಿದ್ದರಾಮಯ್ಯ ಸೂಚನೆ

ಮದ್ಯಪಾನ ಮಾಡಿ ವಾಹನ ಚಲಾಯಿಸಿಬೇಡಿ;  ಸಂಚಾರಿ ನಿಯಮ ಉಲ್ಲಂಘಿಸಿದರೆ ಡಿಎಲ್ ರದ್ದು: ಸಿದ್ದರಾಮಯ್ಯ ಸೂಚನೆ

spot_img
- Advertisement -
- Advertisement -

ಬೆಂಗಳೂರು: ಆರೋಗ್ಯ ಇಲಾಖೆ, ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಹಮ್ಮಿಕೊಂಡಿದ್ದ ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ 65 ಆಂಬುಲೆನ್ಸ್‌ಗಳ ಉದ್ಘಾಟನಾ ಸಮಾರಂಭಕ್ಕೆ ಸೋಮವಾರದಂದು ಸಿಎಂ ಸಿದ್ಧರಾಮಯ್ಯ ಅವರು ಚಾಲನೆ ನೀಡಿದರು. 

ನಂತರದಲ್ಲಿ ಮಾತನಾಡಿದ ಅವರು, ಮದ್ಯಪಾನ ಮಾಡಿ ವಾಹನ ಚಲಾಯಿಸುವ, ಸಂಚಾರಿ ನಿಯಮ ಪಾಲನೆ ಮಾಡದವರ ಚಾಲನಾ ಪರವಾನಗಿಯನ್ನು ರದ್ದು ಮಾಡಲಾಗುತ್ತದೆ. ಸಂಚಾರ ವ್ಯವಸ್ಥೆಗೆ ಕಟ್ಟುನಿಟ್ಟಿನ ನಿಯಮಗಳಿದ್ದರೂ, ಉಲ್ಲಂಘನೆ ಪ್ರಕರಣಗಳು ವರದಿಯಾಗುತ್ತಲಿದ್ದು, ಕೆಲವರ ನಿರ್ಲಕ್ಷ್ಯದ ಫಲವಾಗಿ ತಪ್ಪು ಮಾಡದ ಹಲವರು ಜೀವ ಕಳೆದುಕೊಳ್ಳುವಂತಾಗಿದೆ ಎಂದರು.

ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳನ್ನು ತಡೆಯಬಹುದು. ಕುಡಿದು, ಮೊಬೈಲ್‌ನಲ್ಲಿ ಮಾತನಾಡುತ್ತಾ ವಾಹನ ಚಾಲಾಯಿಸುವ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಬೀಳಬೇಕು. ಎಲ್ಲ ರೀತಿಯ ಅಪಘಾತ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸಿದವರ ಪರವಾನಗಿ ರದ್ದು ಮಾಡಬೇಕು ಎಂದು ತಿಳಿಸಿದರು. 

ಸಾರ್ವಜನಿಕರ ಆರೋಗ್ಯದ ಸುರಕ್ಷತೆಯ ನಿಟ್ಟಿನಲ್ಲಿ ಸದ್ಯ 65 ಆಂಬುಲೆನ್ಸ್‌ ನೀಡಿದ್ದೇವೆ. ಮುಂದಿನ‌ ದಿನಗಳಲ್ಲಿ ಇಡೀ ರಾಜ್ಯಕ್ಕೆ ಅಗತ್ಯವಿರುವಷ್ಟು ವಾಹನಗಳನ್ನು ನೀಡಲಾಗುವುದು ಎಂ‌ದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ  ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!