Friday, August 28, 2026
Homeತಾಜಾ ಸುದ್ದಿಬೆಂಗಳೂರು:ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

ಬೆಂಗಳೂರು:ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

- Advertisement -
- Advertisement -

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ಕೋರ್ಟ್ ವಜಾಗೊಳಿಸಿರೋದು ನಿಮಗೆಲ್ಲಾ ಗೊತ್ತೇ ಇದೆ. ಇದರ ಬೆನ್ನಲ್ಲೇ ಇದೀಗ ಪವಿತ್ರ ಗೌಡ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಹೌದು…ಅಕ್ಟೋಬರ್.14ರಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಪವಿತ್ರ ಗೌಡ  ಜಾಮೀನು ಕೋರಿ ಸಲ್ಲಿಸಿದ್ದ ಎ.1 ಆರೋಪಿ ಪವಿತ್ರಾ ಗೌಡ ಅರ್ಜಿಯನ್ನು ವಜಾಗೊಳಿಸಿತ್ತು.ಜಾಮೀನು ಅರ್ಜಿ ವಜಾಗೊಂಡ ನಂತ್ರ, ಆರೋಪಿ ಪವಿತ್ರಾ ಗೌಡ ಕಣ್ಣೀರಿಟ್ಟಿದ್ದರು.

ನಟ ದರ್ಶನ್ ಜಾಮೀನು ಅರ್ಜಿಯೂ ವಜಾಗೊಂಡಿದ್ದು ಅವರು ಈಗಾಗಲೇ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅದರ ಬೆನ್ನಲ್ಲೇ ಇದೀಗ ಪವಿತ್ರಾ ಗೌಡ ಕೂಡ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!