Monday, June 30, 2025
Homeಕರಾವಳಿಉಡುಪಿಉಡುಪಿ;ಅರೆಬೆತ್ತಲೆಯಾಗಿ ಬಂದು ಮನೆಯ ಬಾಗಿಲು ಬಡಿದ ಯುವಕ; ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಉಡುಪಿ;ಅರೆಬೆತ್ತಲೆಯಾಗಿ ಬಂದು ಮನೆಯ ಬಾಗಿಲು ಬಡಿದ ಯುವಕ; ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

spot_img
- Advertisement -
- Advertisement -

ಉಡುಪಿ;ಅರೆಬೆತ್ತಲೆಯಾಗಿ ಬಂದು ಮನೆಯ ಬಾಗಿಲು ಬಡಿದ ಯುವಕನನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.

ಮಧ್ಯರಾತ್ರಿ ಮಲ್ಪೆ ಹನುಮಾನ್ ನಗರ ಪ್ರದೇಶದಲ್ಲಿ ಅರೆಬೆತ್ತಲೆಯಾಗಿ ಯುವಕನೊಬ್ಬ ಎಲ್ಲರ ಮನೆಯ ಬಾಗಿಲು ತಟ್ಟಿ ಓಡುತ್ತಿದ್ದ. ಆತನನ್ನುಸ್ಥಳೀಯ ನಿವಾಸಿಗಳು ಮಲ್ಪೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.ಮಲ್ಪೆ ಪೊಲೀಸರ ಅವನ ಮೇಲೆ ತನಿಖೆಯನ್ನು ಕೂಡ ನಡೆಸದೆ ಬಿಟ್ಟು ಕಳಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೇ ಪೊಲೀಸರ ನಡೆಗೆ ಆಕ್ರೋಶ ಹೊರ ಹಾಕಿದ್ದಾರೆ.

ಅಲ್ಲದೇ ಮಲ್ಪೆ ಪೊಲೀಸರ ಕಾರ್ಯ ವೈಖರಿ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು  ಸಾರ್ವಜನಿಕರು ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!