- Advertisement -
![]()
- Advertisement -
ಉಡುಪಿ: ಉಡುಪಿ ನಗರದ ಬಸ್ ನಿಲ್ದಾಣ ಆಸು ಪಾಸಿನಲ್ಲಿ ಅಕ್ರಮ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ ನಡೆದಿದೆ.
ಉಡುಪಿ ನಗರದ ಪ್ರಮುಖ ರಸ್ತೆಗಳಲ್ಲಿ ಇನ್ಸ್ ಪೆಕ್ಟರ್ ರಾಮಚಂದ್ರ ನೇತೃತ್ವದಲ್ಲಿ ನಿನ್ನೆ ರಾತ್ರಿ ರೌಂಡ್ಸ್ ಹಾಕಿದ ಪೊಲೀಸರು, ಬಸ್ ನಿಲ್ದಾಣದ ಪರಿಸರದಲ್ಲಿ ತಡ ರಾತ್ರಿಯವರೆಗೂ ನಿಂತಿದ್ದ ಜನರನ್ನು ಚದುರಿಸಿದ್ದಾರೆ.
ಬಸ್ ನಿಲ್ದಾಣದಲ್ಲಿ ರಾತ್ರಿಯಾಗುತ್ತಿದ್ದಂತೆಯೇ ಮಂಗಳಮುಖಿಯರಿಂದ ಸಮಸ್ಯೆ ಎದುರಾಗುತ್ತಿದೆ ಎಂಬ ದೂರುಗಳೂ ಕೂಡಾ ಬಂದಿದ್ದವು.ಈ ಹಿನ್ನೆಲೆಯಲ್ಲಿ ತಡ ರಾತ್ರಿಯವರೆಗೂ ನಗರದಲ್ಲಿ ಓಡಾಡುತ್ತಿದ್ದ ಜನರಿಗೆ ಪೊಲೀಸರು ಎಚ್ಚರಿಕೆ ಕೊಟ್ಟಿದ್ದಾರೆ.
- Advertisement -


