ಪುತ್ತೂರು; ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಕಳ್ಳಿಯರನ್ನು ಪುತ್ತೂರು ಪೊಲೀಸರು ಹೆಡೆ ಮುರಿ ಕಟ್ಟಿದ್ದಾರೆ.
ದಿನಾಂಕ 19.12.2024 ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ ಆರೋಪಿತೆಯರಾದ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದಾ ಎಂಬವರುಗಳನ್ನು ದಸ್ತಗಿರಿ ಮಾಡಿ, ಅವರಿಂದ ಕಳವಾದ ರೂ 25,000/- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.
ಇನ್ನೊಂದು ಪ್ರಕರಣದಲ್ಲಿ ದಿನಾಂಕ 13-12-2024 ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು, ರೂ 77000 /- ಮೌಲ್ಯದ 09 ಗ್ರಾಂ ತೂಕದ 03 ಚಿನ್ನದ ಉಂಗುರಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಾಂಕ 19-12-2024 ರಂದು ಜ್ಯುವೆಲ್ಲರ್ಸ್ ಮಾಲೀಕರಾದ ಶಿವಪ್ರಸಾದ್ ಭಟ್ ರವರು ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2024 ಕಲಂ: 305 ಬಿಎನ್ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿತೆ ನೀರುಮಾರ್ಗ ಮಂಗಳೂರು ನಿವಾಸಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000 /- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.