- Advertisement -
![]()
- Advertisement -
ಶಿವಮೊಗ್ಗ: ಇಲ್ಲಿನ ಹೊಸನಗರ ತಾಲೂಕಿನ ಗುಬ್ಬಿಗಾ ಗ್ರಾಮದ ಮನೆಯೊಂದರ ಅಂಗಳದಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಗುರುವಾರ (ಜ.09)ದಂದು ನಡೆದಿದೆ.
ಗುಬ್ಬಿಗಾ ಗ್ರಾಮದ ಮಂಜಪ್ಪಗೌಡ ಅವರ ಮನೆ ಅಂಗಳದಲ್ಲಿದ್ದ ನಾಯಿಯನ್ನು ಕಚಿಕೊಂಡ ದೃಶ್ಯವು ಮನೆಯ ಅವರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಳಗ್ಗೆ ಮನೆಯ ನಾಯಿ ಕಾಣಿಸದಿದ್ದಾಗ ಯಜಮಾನ ಮಂಜಪ್ಪಗೌಡ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಇನ್ನು ಚಿರತೆ ಓಡಾಟದಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
- Advertisement -


