- Advertisement -
- Advertisement -
ಬೆಂಗಳೂರು: ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ದಾರಿಯಿಂದ ತನ್ನನ್ನು ಬಿಡುಗಡೆಗೊಳಿಸುವಂತೆ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಪಕ್ಷದ ಹಿರಿಯರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆಗೆ ಸರ್ಕಸ್ ನಡೆಯುತ್ತಿರುವುದರ ಮಧ್ಯೆಯೇ ವಿ. ಸುನಿಲ್ ಕುಮಾರ್ ಪಕ್ಷದ ಹಿರಿಯರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.
ಸುನಿಲ್ ಅವರು ಈ ನಿರ್ಣಯಕ್ಕೆ ತೆಗೆದುಕೊಳ್ಳಲು ಬಣ ರಾಜಕಾರಣ ಕಾರಣವಲ್ಲ, ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಸಂಘಟನಾತ್ಮಕವಾಗಿ ತೊಡಗಿಕೊಳ್ಳುವುದು ಕಷ್ಟವಾಗುತ್ತಿರುವುದರಿಂದ ಈ ನಿರ್ಣಯಕ್ಕೆ ಬಂದಿದ್ದಾರೆ. ಬಿಜೆಪಿಯಲ್ಲಿ ಪ್ರಧಾನ ಕಾರ್ಯದರ್ಶಿ ಹುದ್ದೆ ಆಯಕಟ್ಟಿನದ್ದಾಗಿದ್ದು, ಸಾಮಾನ್ಯವಾಗಿ ನಾಲ್ವರು ಪ್ರಮುಖರನ್ನು ಮಾತ್ರ ಈ ಹುದ್ದೆಗೆ ನಿಯೋಜನೆ ಮಾಡಲಾಗುತ್ತದೆ. ಸುನಿಲ್ ಕುಮಾರ್, ನಂದೀಶ್ ರೆಡ್ಡಿ, ಪ್ರೀತಮ್ ಗೌಡ ಹಾಗೂ ಪಿ. ರಾಜೀವ್ ಸದ್ಯ ಈ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.
- Advertisement -