Saturday, June 6, 2026
Homeಕರಾವಳಿಉಡುಪಿಉಡುಪಿ; ಬ್ರಹ್ಮಾವರ ಮೂಲದ ಎಂಜಿನಿಯರ್ ಗಂಗಾವತಿಯಲ್ಲಿ ಆತ್ಮಹತ್ಯೆ

ಉಡುಪಿ; ಬ್ರಹ್ಮಾವರ ಮೂಲದ ಎಂಜಿನಿಯರ್ ಗಂಗಾವತಿಯಲ್ಲಿ ಆತ್ಮಹತ್ಯೆ

- Advertisement -
- Advertisement -

ಉಡುಪಿ; ಬ್ರಹ್ಮಾವರ ಮೂಲದ ಎಂಜಿನಿಯರ್ ಗಂಗಾವತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಂ.ಕೆ.ಟೆಂಪಲ್ ಕನ್​ಸ್ಟ್ರಕ್ಷನ್​​ ಮಾಲೀಕ, ಯುವ ಇಂಜಿನಿಯರ್  ಬ್ರಹ್ಮಾವರದ ವಿನಯ್ ಕುಮಾರ್ (38) ​ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.


ಕನಕಗಿರಿ ರಸ್ತೆಯಲ್ಲಿರುವ ಕೃಷಿ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ ಸಮೀಪದಲ್ಲಿ ಬಾಡಿಗೆ ಮನೆಯಲ್ಲಿ ಇವರು ವಾಸವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿನಯ್ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಾವತಿಯ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಬ್ರಹ್ಮಾವರದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು ಎಂದಿದ್ದಾರೆ.

- Advertisement -

Latest News

error: Content is protected !!