Thursday, June 4, 2026
Homeಕರಾವಳಿಮಂಗಳೂರುಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಬೆಂಕಿ ಅನಾಹುತ; 250 ಕ್ಕೂ ಹೆಚ್ಚು ಅಡಿಕೆ ಗಿಡಗಳು ಬೆಂಕಿಗಾಹುತಿ

ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಬೆಂಕಿ ಅನಾಹುತ; 250 ಕ್ಕೂ ಹೆಚ್ಚು ಅಡಿಕೆ ಗಿಡಗಳು ಬೆಂಕಿಗಾಹುತಿ

- Advertisement -
- Advertisement -

ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಬೆಂಕಿ ಅನಾಹುತ ಸಂಭವಿಸಿ 250 ಕ್ಕೂ ಹೆಚ್ಚು ಅಡಿಕೆ ಗಿಡಗಳು ಬೆಂಕಿಗಾಹುತಿಯಾಗಿರುವ ಘಟನೆ ಹಿರೇಬಂಡಾಡಿ ಗ್ರಾಮದ ಪಡ್ಯೊಟ್ಟು ಎಂಬಲ್ಲಿ ನಡೆದಿದೆ.

ಪಡ್ಯೊಟ್ಟು ನಿವಾಸಿ ಯತೀಶ್‌ ಶೆಟ್ಟಿ ಎಂಬವರಿಗೆ ಸೇರಿದ ಸುಮಾರು 1 ಎಕ್ರೆ ಪ್ರದೇಶದಲ್ಲಿನ ಅಡಿಕೆ ತೋಟದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಸುಮಾರು 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿದ್ದು ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ.

 ಪುತ್ತೂರು ಹಾಗೂ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದರೂ ಬೆಂಕಿಯನ್ನು ಹತೋಟಿಗೆ ತರಲು ಅಸಾಧ್ಯವಾಗಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದ ಸಹಕಾರದೊಂದಿಗೆ ನಂದಿಸಲಾಯಿತು.

- Advertisement -

Latest News

error: Content is protected !!