Friday, June 27, 2025
Homeತಾಜಾ ಸುದ್ದಿಪ್ರೀತಿಸಿದ ಹುಡುಗಿಯೊಂದಿಗೆ 3 ದಿನಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಪ್ರೀತಿಸಿದ ಹುಡುಗಿಯೊಂದಿಗೆ 3 ದಿನಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

spot_img
- Advertisement -
- Advertisement -

ಮಂಡ್ಯ: ಮೂರು ದಿನಗಳ ಹಿಂದೆಯಷ್ಟೆ ಮದುವೆಯಾಗಿದ್ದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ  ಮಾ. 5ರದಂದು ಸಂಭವಿಸಿದೆ.

ಮೃತಪಟ್ಟ ಯುವಕ ಕೆ.ಆರ್.ಪೇಟೆ ಪುರಸಭೆ ಹಿರಿಯ ಸದಸ್ಯ ಕೆ.ಸಿ. ಮಂಜುನಾಥ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ವನಿತಾ ಮಂಜುನಾಥ್ ಅವರ ಪುತ್ರ ಶಶಾಂಕ್ (28) ಎಂದು ತಿಳಿದಂದು ಬಂದಿದೆ.

ಶಶಾಂಕ್ ಮೂರು ದಿನಗಳ ಹಿಂದೆ ಅಂದರೆ ಕಳೆದ ಮಾ.2ರ ಭಾನುವಾರವಷ್ಟೇ ಪ್ರೀತಿಸಿದ ಹುಡುಗಿಯೊಂದಿಗೆ ವಿವಾಹವಾಗಿದ್ದರು. ಅವರು ಜಾರ್ಖಂಡ್ ಮೂಲದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರು.

ಆದರೆ ದುರಾದೃಷ್ಟವಶಾತ್ ಅವರು ಮಂಗಳವಾರ ಸಂಜೆ ಹೃದಯಾಘಾತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಮಾ.5ರಂದು ಬುಧವಾರದಂದು ಮೃತರ ಅಂತ್ಯಕ್ರಿಯೆ ಕೆ.ಆರ್.ಪೇಟೆ ಪಟ್ಟಣದ ಮೃತರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!