- Advertisement -
![]()
- Advertisement -
ಮಂಗಳೂರು: ಗಾಂಜಾ ಸೇವನೆ ಮಾಡಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಇಬ್ಬರನ್ನು ಶಿವಬಾಗ್ ಮತ್ತು ಬಿಕರ್ನಕಟ್ಟೆ ಬಳಿಯಿಂದ ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಿಕರ್ನಕಟ್ಟೆ ಕಕ್ಕೆಬೆಟ್ಟು ನಿವಾಸಿ ಜ್ಞಾನೇಶ್ ರೈ (20) ಮತ್ತು ಬಿಕರ್ನಕಟ್ಟೆ ದತ್ತನಗರದ ಕೌಶಿಕ್ (21) ಬಂಧಿತರು .
ಗಾಂಜಾ ಸೇವಿಸಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇಬ್ಬರ ವಿರುದ್ಧವೂ ಮಾದಕ ದ್ರವ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
- Advertisement -


