ಬೆಳ್ತಂಗಡಿ; ಮೊಗ್ರು ಗ್ರಾಮದ ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ (ರಿ.) ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪದ್ಮುಂಜ ಇದರ ಸಹಯೋಗದೊಂದಿಗೆ ಶ್ರೀರಾಮ ಶಿಶುಮಂದಿರದ ಆವರಣದಲ್ಲಿ, ಏಪ್ರಿಲ್ 13 ರಿಂದ 17ರವರೆಗೆ ಆಯೋಜಿಸಲಾಗಿದ್ದ 5 ದಿನಗಳ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏಪ್ರಿಲ್ 17ರಂದು ಶಿಶುಮಂದಿರದಲ್ಲಿ ನಡೆಯಿತು. ಉದಯ ಭಟ್, ನಿರ್ದೇಶಕರು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉದಯ ಭಟ್ ಕೊಳಬ್ಬೆ ಇವರು ಸಭಾಧ್ಯಕ್ಷತೆ ವಹಿಸಿದ್ದರು. ಅಲೆಕ್ಕಿ ಶ್ರೀರಾಮ ಸೇವಾ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ರಮೇಶ್.ಎನ್, ಸಂಚಾಲಕರಾದ ಅಶೋಕ್, ಎನ್ , ಉಪಸ್ಥಿತರಿದ್ದರು.
ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ನವೀನ್, ಶ್ರೀ ರಮೇಶ್, ಶ್ರೀ ಲಿಂಗಪ್ಪ, ಶ್ರೀಮತಿ ಮಾಲಿನಿ, ಶ್ರೀಮತಿ ವಿದ್ಯಾ ಕುಮಾರಿ, ಸ್ಪೂರ್ತಿ, ಕುಮಾರಿ ದಿಶಾ, ಶ್ರೀಮತಿ ಸರೋಜಿನಿ ಉಪಸ್ಥಿತರಿದ್ದರು. ಗುರುವರ್ಯರಿಗೆ ಶ್ರೀರಾಮ ಸೇವಾ ಟ್ರಸ್ಟ್ ನ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.65 ಚಿಣ್ಣರು ಪಾಲ್ಗೊoಡಿದ್ದ ಈ ಶಿಬಿರದಲ್ಲಿ ಸ್ಪೂರ್ತಿ ಯಕ್ಷಿಣಿ ಮಾಯಾ ಲೋಕದ ಶ್ರೀ ರಾಜು ಸರ್ ಮಕ್ಕಳನ್ನು ಜಾದು ಲೋಕಕ್ಕೆ ಕೊಂಡೊಯ್ದು ರಂಜಿಸಿದರು.
ಶ್ರೀರಾಮ ಶಿಶು ಮಂದಿರದ ಮಾತೆಯರು ಉಪಸ್ಥಿತರಿದ್ದರು. ಅದಿತಿ ಪುರುಷೋತ್ತಮ ಗೌಡ ಪದ್ಮುಂಜ ಇವರು ಯೋಗ ದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ ಕು. ಅದಿತಿ ಪುರುಷೋತ್ತಮ ಗೌಡ ಪದ್ಮುಂಜ ರವರಿಗೆ ಸನ್ಮಾನ ಮಾಡಲಾಯಿತು. ಅವರು ಯೋಗಾಸನಗಳನ್ನು ಮಾಡಿ ಮಕ್ಕಳಿಗೆ ಉತ್ತೇಜನ ತುಂಬಿದರು. ಶಿಬಿರದಲ್ಲಿ ಪೇಪರ್ ಕ್ರಾಫ್ಟ್, ಗೂಡುದೀಪ ತಯಾರಿ, ಕಸದಿಂದ ರಸ, ಬಾಟಲ್ ಪೇಂಟಿಂಗ್, ನೃತ್ಯ ತರಬೇತಿ, ಚಿತ್ರಕಲೆ, ವ್ಯಕ್ತಿತ್ವ ವಿಕಸನ, ಮೋಜಿನ ಆಟಗಳು, ಕುಣಿತ ಭಜನೆ, ಚಿಕ್ಕ ಪ್ರವಾಸ, ಬರವಣಿಗೆ ಅಭ್ಯಾಸ,ಏರೋಬಿಕ್ಸ್, ಯೋಗ, ಮಣ್ಣಿನ ಕರಕುಶಲ ತರಬೇತಿ ನಡೆಯಿತು.ಶ್ರೀಮತಿ ರತ್ನಾವತಿ ಪ್ರಾರ್ಥನೆ ಸಲ್ಲಿಸಿ,ಶ್ರೀಮತಿ ಪುಷ್ಪಲತಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.