- Advertisement -
- Advertisement -
ಬೆಳ್ತಂಗಡಿ; ಮನೆಯವರು ಬೆಳ್ತಂಗಡಿಗೆ ತೆರಳಿದ್ದಾಗ ಮನೆಗೆ ನುಗ್ಗಿ ನಗ ನಗದು ಕಳ್ಳತನ ಮಾಡಿರುವ ಘಟನೆ ಮಾಲಾಡಿ ಗ್ರಾಮದ ಕೊಲ್ಪೆದಬೈಲು ವಸಂತಿ ಹೆಗ್ಡೆ ಎಂಬವರ ಮನೆಯಲ್ಲಿ ನಡೆದಿದೆ.
ವಸಂತಿ ಅವರು ತಮ್ಮ ಮಗ ಹಾಗೂ ಸೊಸೆಯೊಂದಿಗೆ ದಿನಾಂಕ: 20.04.2025 ರಂದು ಮಧ್ಯಾಹ್ನ ಮನೆಯಿಂದ ಬೆಳ್ತಂಗಡಿಗೆ ತೆರಳಿದ್ದರು. ಸಂಜೆ ವಾಪಾಸು ಮನೆಗೆ ಬಂದು ನೋಡಿದಾಗ ಮನೆಯ ಮುಂದಿನ ಬಾಗಿಲಿಗೆ ಹಾಕಿರುವ ಬೀಗದ ಕೊಂಡಿಯನ್ನು ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು ಕೋಣೆಯ ಕಪಾಟುಗಳಲ್ಲಿದ್ದ ಚಿನ್ನಾಭರಣಗಳನ್ನು ಹಾಗೂ ನಗದು ರೂ 30,000/- ಹಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಚಿನ್ನಾಭರಣಗಳ ಒಟ್ಟು ತೂಕ 160.5 ಗ್ರಾಂ ಆಗಿದ್ದು ಇದರ ಮೌಲ್ಯ ರೂ 13,72,000/- . ನಗದು ಸೇರಿ ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ 14,02,000/- ಆಗಿರುತ್ತದೆ ಎಂದು ವಸಂತಿ ಅವರು ಪುಂಜಾಲಕಟ್ಟೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
- Advertisement -