Monday, June 8, 2026
Homeಕರಾವಳಿಬೆಳ್ತಂಗಡಿ : ಮಾಚಾರ್ ಕೊಲೆ ಯತ್ನ ಪ್ರಕರಣ; ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು

ಬೆಳ್ತಂಗಡಿ : ಮಾಚಾರ್ ಕೊಲೆ ಯತ್ನ ಪ್ರಕರಣ; ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು

- Advertisement -
- Advertisement -

ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಹಣದ ವಿಚಾರದಲ್ಲಿ ಯವಕರ ವಿರುದ್ದ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈ ಕೋರ್ಟ್ ಜಾಮೀನು ನೀಡಿದೆ.

ಘಟನೆ ಆಧರಿಸಿ ಬೆಳ್ತಂಗಡಿ ಪೋಲಿಸರು ಮೂವರು ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆ, ಕಲಂ  109,351(2) ಜೊತೆ 3(5) ಕೊಲೆಯತ್ನ ಪ್ರಕರಣ ದಾಖಲಿಸಿದ್ದರು. ಇದೀಗ ಮೊದಲ ಆರೋಪಿ , ನ್ಯಾಯಾಂಗ ಬಂಧನದಲ್ಲಿರುವ ಹಮೀದ್ ಎಂಬವರಿಗೆ ನಿಯಮಿತ ಜಾಮೀನು ಮತ್ತು ಎರಡನೇ ಆರೋಪಿ ರಿಯಾಝ್ ಮತ್ತು ಮೂರನೇ ಆರೋಪಿ ಅರ್ಷಾದ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಸದ್ರಿ ಪ್ರಕರಣ ಕಳೆದ ಫೆಬ್ರವರಿ 5 ರಂದು ಮಾಚಾರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಇನ್ನೋರ್ವ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುತ್ತಾನೆ.ಸೋಮವಾರ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಇದ್ದ ಪೀಠವು ಈ ಜಾಮೀನು ಮಂಜೂರು ಮಾಡಿತು.ಆರೋಪಿಗಳ ಪರ ಹೈಕೋರ್ಟ್ ವಕೀಲರುಗಳಾದ ಮುಸ್ತಫಾ ಬೆಳ್ತಂಗಡಿ, ಅನ್ವರ್ ಕೆ.ಪಿ ಕುಪ್ಪೆಟ್ಟಿ ಮತ್ತು ಮೋನಿಸ್ ಸಾಹುಕಾರ್  ವಾದವನ್ನು ಮಂಡಿಸಿದ್ದಾರೆ.

- Advertisement -

Latest News

error: Content is protected !!