ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಯು ದಕ್ಷಿಣ ಕನ್ನಡದ ಬಜಪೆಯಲ್ಲಿ ನಡೆದಿದ್ದು, ಈ ಕೃತ್ಯವು ಅತ್ಯಂತ ಭೀಭತ್ಸ್ಯ ಮತ್ತು ವೈಯುಕ್ತಿಕವಾಗಿ ನನಗೆ ಬಹಳ ಆಘಾತವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುಹಾಸ್ ಶೆಟ್ಟಿಯ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಆರೋಪಿಯನ್ನು ಕೂಡ ರಕ್ಷಿಸುವ ಪ್ರಶ್ನೆಯೇ ಇಲ್ಲ. ಈಗಾಗಲೇ ಈ ಕೃತ್ಯದ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಹತ್ಯೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ.
ಇನ್ನು ಈ ಕೃತ್ಯವೂ ಮೇಲ್ನೋಟಕ್ಕೆ ಹಳೆ ದ್ವೇಷದಂತೆ ಕಂಡುಬಂದರೂ, ಇದೊಂದು ಕರಾವಳಿಯಲ್ಲಿ ಶಾಂತಿ ಭಂಗ ಮಾಡುವ ಉದ್ದೇಪೂರ್ವಕ ತಯಾರಿಯಂತಿದೆ. ಈಗಾಗಲೇ ಬಿಜೆಪಿ ಪಕ್ಷದವರು ಸುಹಾಸ್ ಪ್ರಕರಣವನ್ನು ರಾಜಕೀಯ ಮಾಡಲು ಹೊರಟಿದ್ದಾರೆ. ಇದೆಲ್ಲದರ ಹೊರತಾಗಿ ನಮ್ಮ ಸರ್ಕಾರ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.