Saturday, June 28, 2025
Homeಕರಾವಳಿಮಂಗಳೂರುಮಂಗಳೂರು; ಹೆತ್ತಮ್ಮನ ಮಡಿಲು ಬರಿದು ಮಾಡಿದ ವರುಣ; ಒಂದೇ ಕುಟುಂಬದ ಮೂವರು ಮಹಾ ದುರಂತಕ್ಕೆ ಬಲಿ

ಮಂಗಳೂರು; ಹೆತ್ತಮ್ಮನ ಮಡಿಲು ಬರಿದು ಮಾಡಿದ ವರುಣ; ಒಂದೇ ಕುಟುಂಬದ ಮೂವರು ಮಹಾ ದುರಂತಕ್ಕೆ ಬಲಿ

spot_img
- Advertisement -
- Advertisement -

ಮಂಗಳೂರು; ಉಳ್ಳಾಲದ ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಶುಕ್ರವಾರ (ಮೇ 30) ಮುಂಜಾನೆ 4 ಗಂಟೆ ಸುಮಾರಿಗೆ ತೋಟದ ನಡುವಿರುವ ಮನೆಯ ಮೇಲೆ ಬೃಹತ್‌ ಮರ ಸಹಿತ ಸುಮಾರು 30 ಅಡಿ ಧರೆ ಕುಸಿದು ಬಿದ್ದ ಪರಿಣಾಮ ಎರಡು ಪುಟ್ಟ ಕಂದಮ್ಮಗಳು ಹಾಗೂ ಮಹಿಳೆ ಸಾವನ್ನಪ್ಪಿದ್ದಾರೆ.


ಘಟನೆ ನಡೆದ ವೇಳೆ ಮನೆ ಯಜಮಾನ ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮಾ, ಪುತ್ರ ಸೀತಾರಾಮ ಮತ್ತು ಅವರ ಪತ್ನಿ ಅಶ್ವಿನಿ ಮಕ್ಕಳಾದ ಆರುಷ್‌, ಆರ್ಯನ್‌ ಮಲಗಿದ್ದರು. ಸೀತಾರಾಮ ಅವರು ಮನೆಯಿಂದ ಹೊರಬರಲು ಯಶಸ್ವಿಯಾಗಿದ್ದಾರೆ. ಪ್ರೇಮಾ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ. ಅವರ ಮೃತದೇಹವೂ ಮಣ್ಣಿನಡಿಯಲ್ಲೇ ಇದೆ. ಕಾಂತಪ್ಪ ಪೂಜಾರಿ ಅವರನ್ನು ರಕ್ಷಿಸಲಾಗಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಅಶ್ವಿನಿ ಅವರನ್ನು ರಕ್ಷಣೆ ಮಾಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ.

ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (54 ವ) ಮಕ್ಕಳಾದ ಮೂರು ವರ್ಷದ ಮಗು ಆರ್ಯನ್‌‌, ಎರಡು ವರ್ಷ ಪ್ರಾಯದ ಆರುಷ್ (2 ವರ್ಷ) ಮೃತಪಟ್ಟಿದ್ದಾರೆ. ಆರುಷ್‌ ನನ್ನು ಮಣ್ಣಿನಡಿಯಿಂದ ತೆಗೆದು ರಕ್ಷಣೆ ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಎನ್‌ ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಇನ್ನು ಮಕ್ಕಳನ್ನು ರಕ್ಷಿಸಲು ತಾಯಿ ಅಶ್ವಿನಿ ಪಡುತ್ತಿದ್ದ ಯಮಯಾತನೆ ಎಂಥವರ ಕಣ್ಣಾಲಿಗಳನ್ನು ತೇವಗೊಳಿಸುವಂತಿತ್ತು. ಸರಣಿ ಕೊಲೆಗಳಿಂದಾಗಿ ಕರಾವಳಿ ಬೂದಿ ಮುಚ್ಚಿದ ಕೆಂಡದಂತಿರುವ ಈ ಸನ್ನಿವೇಶದಲ್ಲಿ ಧರ್ಮ ಮೀರಿ ಮುಸ್ಲಿಂ ಬಾಂಧವರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ ಅನ್ನೋದನ್ನು ಸಾರಿ ಹೇಳುವಂತಿತ್ತು.

- Advertisement -
spot_img

Latest News

error: Content is protected !!