- Advertisement -
- Advertisement -
ಬಂಟ್ವಾಳ: ಮಳೆಗಾಲ ಶುರುವಾಗುತ್ತಿದ್ದಂತೆ ಕರಾವಳಿಯಲ್ಲಿ ಕಳ್ಳರ ಕಾಟ ಶುರುವಾಗಿದೆ. ಸರಪಾಡಿ ಗ್ರಾಮದ ಪೆರಿಯಪಾದೆ ಎಂಬಲ್ಲಿ ದಿನಸಿ ಅಂಗಡಿಗೆ ನುಗ್ಗಿ ನಗದು ಕಳ್ಳತನ ಮಾಡಿದ್ದಾರೆ.
ಮಹಮ್ಮದ್ ಹನೀಫ್ ಎಂಬವರಿಗೆ ಸೇರಿದ ದಿನಸಿ ಅಂಗಡಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಡ್ರಾಯರ್ ನಲ್ಲಿರಿಸಿದ್ದ ಸುಮಾರು ರೂ.8 ಸಾವಿರ ನಗದನ್ನು ಕಳವು ಮಾಡಿದ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.
- Advertisement -