ಬೆಂಗಳೂರುಚ ಕ್ಲಾಸ್ ನಲ್ಲಿ ಕನ್ನಡದಲ್ಲಿ ಉತ್ತರ ನೀಡಿದ್ರು ಎಂಬ ಕಾರಣಕ್ಕೆ ಆರ್ ವಿ ಪಿಯು ಕಾಲೇಜಿನ ಉಪನ್ಯಾಸಕ ರೂಪೇಶ್ ಪುತ್ತೂರು ಅವರನ್ನು ಬೆಂಗಳೂರಿನ ಆರ್.ವಿ ಪಿಯು ಲರ್ನಿಂಗ್ ಹಬ್ ಪ್ರಿನ್ಸಿಪಾಲ್ ಅಮಾನತು ಮಾಡಿದ ಪ್ರಕರಣ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ರೂಪೇಶ್ ಪುತ್ತೂರು ಅವರನ್ನ ವಜಾ ಮಾಡಿದ್ದ ಆರ್ ವಿ ಶಿಕ್ಷಣ ಸಂಸ್ಥೆ ಎಚ್ಚೆತ್ತುಕೊಂಡಿದೆ. ಉಪನ್ಯಾಸಕ ರೂಪೇಶ್ ಅವರನ್ನ ವಜಾ ಮಾಡಿದ್ದಕ್ಕೆ ಬೆಂಗಳೂರಿನ ಆರ್.ವಿ ಪಿಯು ಲರ್ನಿಂಗ್ ಹಬ್ ಪ್ರಿನ್ಸಿಪಾಲ್ ಕ್ಷಮೆಯಾಚಿಸಿದ್ದು, ಉಪನ್ಯಾಸಕರಿಗೆ ಮತ್ತೆ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ವಿದ್ಯಾರ್ಥಿನಿಯೊಬ್ಬಳು ಕನ್ನಡದಲ್ಲಿ ಕೇಳಿದ್ದ ಪ್ರಶ್ನೆಗೆ ಕನ್ನಡದಲ್ಲೇ ಉತ್ತರಿಸಿದ್ದಕ್ಕೆ ಉಪನ್ಯಾಸಕ ರೂಪೇಶ್ ಅವರಿಂದ ರಾಜೀನಾಮೆ ಪಡೆಯಲಾಗಿತ್ತು. ಈ ಬಗ್ಗೆ ಉಪನ್ಯಾಸಕ ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದರು. ಬಳಿಕ ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಕಾಲೇಜಿಗೆ ಭೇಟಿ ಮಾಡಿ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದ್ದು, ಬಳಿಕ ಉಪನ್ಯಾಸಕ ವಜಾವನ್ನು ವಾಪಸ್ ಪಡೆದುಕೊಂಡಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಉಪನ್ಯಾಸಕ ಬೆಂಬಲಕ್ಕೆ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ನಿಂತಿದ್ದು, ಕನ್ನಡಿಗನಿಗೆ ಆದ ಅನ್ಯಾಯವನ್ನು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಲಾಲ್ ಬಾಗ್ ಬಳಿ ಇರುವ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಕಚೇರಿಗೆ ಭೇಟಿ ನೀಡಿ ಮುಖ್ಯಸ್ಥರೊಂದಿಗೆ ಚರ್ಚಿಸಿ ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಬಳಿಕ ರಾಜೀನಾಮೆ ಪಡೆದಿದ್ದ ಪ್ರಿನ್ಸಿಪಾಲ್ ಕ್ಷಮೆ ಕೇಳಿದ್ದಾರೆ. ಇತ್ತ ಜಂಟಿ ಕಾರ್ಯದರ್ಶಿ ನಾಗರಾಜ್ ನನಗೆ ಈ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ನನಗೂ ಕನ್ನಡದ ಬಗ್ಗೆ ವಿಶ್ವಾಸ ಇದೆ. ಇದು ಸಹ ಕನ್ನಡದ ಸಂಸ್ಥೆ ಮಕ್ಕಳಿಗೆ ಈ ಬಗ್ಗೆ ಕೌನ್ಸಲಿಂಗ್ ಕೈಗೊಳ್ಳುತ್ತೇವೆ. ರಾಜೀನಾಮೆಯನ್ನು ವಾಪಾಸ್ ಪಡೆದಿದ್ದೇವೆ ಎಂದಿದ್ದಾರೆ.
ಇನ್ನು ಅಮಾನತು ಮಾಡಿದ ಬೆನ್ನಲ್ಲೇ ರೂಪೇಶ್ ಪುತ್ತೂರು ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ಮೂಲಕ ತಮ್ಮ ನೋವು ಕೊಂಡಿದ್ದರು. ಕರ್ನಾಟಕದಲ್ಲಿ ಕನ್ನಡ ಮಾತನಾಡೋಕೆ ಭಯದ ವಾತಾವರಣ ಸೃಷ್ಟಿಯಾಗಿದೆ. ಕನ್ನಡ ಮಾತನಾಡಿದಕ್ಕೆ ನನ್ನ ಕೆಲಸ ಹೋಗಿದೆ. ನನ್ನಿಂದ ಬಲವಂತವಾಗಿ ರಾಜೀನಾಮೆ ಪಡೆದುಕೊಂಡಿದ್ದಾರೆ. ನನ್ನ ಮಗಳ ಸರ್ಟಿಫಿಕೇಟ್ ಕೊಡದಿದ್ದರೂ ಪರವಾಗಿಲ್ಲ ಮತ್ತೊಬ್ಬ ಕನ್ನಡಿಗನಿಗೆ ಈ ರೀತಿ ಆಗಬಾರದು ಎಂದಿದ್ದರು.