Thursday, June 4, 2026
HomeUncategorizedಮಂಗಳೂರು: ತಲೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಆತ್ಮಹ*ತ್ಯೆ ಶರಣು

ಮಂಗಳೂರು: ತಲೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಆತ್ಮಹ*ತ್ಯೆ ಶರಣು

- Advertisement -
- Advertisement -

ಮಂಗಳೂರು: ತಲೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಲಪಾಡಿ ದೇವಿಪುರದ ಶಾರದಾ ವಿದ್ಯಾಲಯದ ಆವರಣದ ಸಿಬ್ಬಂದಿ ವಸತಿ ಗೃಹದಲ್ಲಿ ನಡೆದಿದೆ.

ಮಂಗಳೂರು ಬೆಂದೂರ್‌ ವೆಲ್‌ ಸೈಂಟ್‌ ಆಗ್ನೆಸ್‌ ಕಾಲೇಜಿನಲ್ಲಿ ದ್ವಿತೀಯ ಸಾಲಿನ ಬಿಎ ವ್ಯಾಸಂಗ ನಡೆಸುತ್ತಿದ್ದ ವಿದ್ಯಾರ್ಥಿನಿ ಶ್ರೇಯಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಶ್ರೇಯಾ ತಾಯಿ ಪುಷ್ಪಲತಾ ಅವರು ದೇವಿಪುರದ ಶಾರದಾ ವಿದ್ಯಾಲಯದಲ್ಲಿ ಅಟೆಂಡರ್‌ ಕೆಲಸ ಮಾಡುತ್ತಿದ್ದು, ಸಂಸ್ಥೆಯ ವಸತಿ ಗೃಹದಲ್ಲಿ ಗಂಡ ಮಕ್ಕಳ ಜೊತೆ ನೆಲೆಸಿದ್ದರು. ಸೋಮವಾರ ಎಂದಿನಂತೆ ಶ್ರೇಯಾ ಬೆಳಗ್ಗೆ ಕಾಲೇಜಿಗೆ ಹೋಗಿದ್ದಳು. ಸಂಜೆ ಶ್ರೇಯಾ ತಂಗಿ ಶಾಲೆ ಮುಗಿಸಿ ಮನೆಗೆ ಬಂದು ನೋಡಿದಾಗ ಒಳಗೆ ಮನೆಯ ಬೆಡ್‌ ರೂಂ ನಲ್ಲಿ ಶಾಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಡೆತ್‌ನೋಟ್‌ ಪತ್ತೆಯಾಗಿದ್ದು, ಓದಿನಲ್ಲಿ ಕಳೆದ ಎರಡು ತಿಂಗಳಿನಿಂದ ವಿಪರೀತ ಒತ್ತಡ ಎದುರಿಸುತ್ತಿದ್ದು, ತಲೆ ನೋವಿನಿಂದ ಬಳಲುತ್ತಿದ್ದೇನೆ ಎಂದು ಬರೆಯಲಾಗಿದೆ. ಇತ್ತೀಚೆಗೆ ಬರೆದ ಪರೀಕ್ಷೆಯಲ್ಲಿ ಕೂಡಾ ಈಕೆ ಒಂದು ವಿಷಯದಲ್ಲಿ ಫೇಲ್‌ ಆಗಿದ್ದಳು ಎನ್ನಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

- Advertisement -

Latest News

error: Content is protected !!